ರೈಲಿನಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಉಡುಪಿ, ಕುಂದಾಪುರ, ಬೈಂದೂರು ರೈಲ್ವೆ ನಿಲ್ದಾಣಗಳಿಂದ ಕೊಲ್ಲೂರಿಗೆ ನಿರಂತರವಾಗಿ ನೇರ ಸರ್ಕಾರಿ ಬಸ್ ಸೇವೆಯನ್ನು ಕಲ್ಪಿಸಲು ಮಾಹಿತಿ ನೀಡಲಾಗಿದೆ ಎಂದು ತಿಳಿಸಿರುವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಎಂ ಶೆಟ್ಟಿ, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಜಿ.ಸಿ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿಯವರು ಪ್ರತಿ ದಿವಸ ಶ್ರೀ ದೇವಳದ ದಾಸೋಹ ಭವನದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.