ಉದ್ಯಾನದ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ನಂತರ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಿಂದ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರಂಭದಲ್ಲಿ ಚೇತರಿಸಿದಂತೆ ಕಂಡು ಬಂದ ಅದು ಆಹಾರ ಸೇವಿಸಲು ಆರಂಭಿಸಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸಂತೋಷ್ಕುಮಾರ್ ತಿಳಿಸಿದ್ದಾರೆ.