ಮೈಸೂರು: ರಾಜ್ಯದ ಮೊದಲ ಚೆಸ್ ಗ್ರ್ಯಾಂಡ್ಮಾಸ್ಟರ್ ಎಂ.ಎಸ್.ತೇಜ್ಕುಮಾರ್ ಅವರಿಗೆ ಕ್ರೀಡಾ ಇಲಾಖೆಯು ₹ 10 ಲಕ್ಷ ಬಹುಮಾನ ಘೋಷಿಸಿದೆ.
ದಸರಾ ಕ್ರೀಡಾಕೂಟ ಉದ್ಘಾಟನೆ ವೇಳೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಈ ಘೋಷಣೆ ಮಾಡಿದರು.
ಸಾಧಕ ತೇಜ್ಕುಮಾರ್ ಅವರನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ‘ಪ್ರಜಾವಾಣಿ’ ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.
‘ಗ್ರ್ಯಾಂಡ್ಮಾಸ್ಟರ್ ಪದವಿ ಗಿಟ್ಟಿಸಲು ತರಬೇತಿ ಹಾಗೂ ಪ್ರವಾಸಕ್ಕೆಂದು 2 ವರ್ಷಗಳಲ್ಲಿ ₹ 20 ಲಕ್ಷ ಖರ್ಚು ಮಾಡಿದ್ದೇನೆ. ಆದರೆ, ಸರ್ಕಾರದಿಂದ ಬಹುಮಾನ ಬಿಟ್ಟುಬಿಡಿ; ಅಭಿನಂದನೆಯ ಸಂದೇಶವೂ ಬಂದಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.