‘ಬಸವಣ್ಣನವರ 800ನೇ ಲಿಂಗೈಕ್ಯ ಸಂಸ್ಮರಣೆಯ ನಿಮಿತ್ತ ಅವರ ವಚನಗಳು ಶುದ್ಧೀಕರಣಗೊಂಡ ಆವೃತ್ತಿಯಾಗಿ ಈ ಗ್ರಂಥವನ್ನು 1996 ರಲ್ಲಿ ಪ್ರಕಟಿಸಿದ್ದೆವು. 1998ರಲ್ಲಿ ರಾಜ್ಯ ಸರ್ಕಾರ ಈ ಗ್ರಂಥವನ್ನು ನಿಷೇಧಿಸಿ, ಮುಟ್ಟುಗೋಲು ಹಾಕಿಕೊಂಡಿತ್ತು. ಈ ಸಂಬಂಧ ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ, ನಾವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದೆವು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.