ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೃದಯದ ಶಸ್ತ್ರಚಿಕಿತ್ಸೆಗಾಗಿ ಗುರುವಾರ ಸಂಜೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾದರು.
ಶನಿವಾರ ಬೆಳಿಗ್ಗೆ ಲ್ಯಾಪ್ರೋಸ್ಕೋಪಿಕ್ ಕೀಹೋಲ್ ಪ್ರಕ್ರಿಯೆ ಮೂಲಕ ಟಿಶ್ಯೂವಾಲ್ವ್ ಬದಲಾವಣೆ ಮಾಡಲಾಗುವುದು ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.
ಹತ್ತು ವರ್ಷಗಳ ಹಿಂದೆ ಟಿಶ್ಯೂವಾಲ್ವ್ ಅಳವಡಿಸಲಾಗಿತ್ತು. ಇತ್ತೀಚೆಗೆ ದೂಳಿನ ಅಲರ್ಜಿ ಮತ್ತು ಕಫದ ಸಮಸ್ಯೆಯಿಂದ ಹೃದಯ ಕವಾ
ಟದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಹಳೆಯ ವಾಲ್ವ್ ಕಾಲಾವಧಿ ಮುಗಿರುವುದರಿಂದ ಅದನ್ನು ಬದಲಿಸಲು ವೈದ್ಯರು ಸಲಹೆ ನೀಡಿದ್ದರು.
ಡಾ. ಸತ್ಯಕಿ ನೇತೃತ್ವದ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಲಿದೆ. 45 ನಿಮಿಷಗಳಲ್ಲಿ ವಾಲ್ವ್ ಬದಲಾವಣೆ ಪ್ರಕ್ರಿಯೆ ಮುಗಿಯುತ್ತದೆ ಎಂದು ಅವರು ತಿಳಿಸಿದರು. ಇದೇ 26 ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದುವರು.
ಆ ಬಳಿಕ ಸಹೋದರ ಎಚ್.ಡಿ.ರೇವಣ್ಣ ಅವರ ಪುತ್ರ ಸೂರಜ್ ಅವರ ನಿಶ್ಚಿತಾರ್ಥ(ಅ.2) ಕಾರ್ಯಕ್ರಮದಲ್ಲಿ ಭಾಗವಹಿಸಿ, ಎರಡು ವಾರಗಳು ವಿಶ್ರಾಂತಿಗಾಗಿ ಪತ್ನಿ ಅನಿತಾ ಅವರ ಜೊತೆಗೂಡಿ ಸಿಂಗಪುರಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.