ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದೇಶದ ಉಕ್ತಲೇಖನ ಮುಂದುವರಿಕೆ

Last Updated 21 ಸೆಪ್ಟೆಂಬರ್ 2017, 19:47 IST
ಅಕ್ಷರ ಗಾತ್ರ

ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಜಮೀನಿನ ಅಕ್ರಮ ಡಿನೋಟಿಫಿಕೇಷನ್‌ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗಳ ಮೇಲಿನ ಆದೇಶದ ಉಕ್ತಲೇಖನವನ್ನು (dictation) ಹೈಕೋರ್ಟ್‌ ಶುಕ್ರವಾರವೂ ಮುಂದುವರಿಸಲಿದೆ.

ಈ ಕುರಿತಂತೆ ಗುರುವಾರ ಇಡೀ ದಿನ ತೆರೆದ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಉಕ್ತಲೇಖನ ನೀಡಿತು. ಆದೇಶ ಪೂರ್ಣಗೊಳ್ಳದ ಕಾರಣ ಶುಕ್ರವಾರಕ್ಕೆ ಮುಂದೂಡಿತು.

‘ಶಿವರಾಮ ಕಾರಂತ ಬಡಾವಣೆಯಲ್ಲಿ 257 ಎಕರೆ ಜಮೀನಿನ ಅಕ್ರಮ ಡಿನೋಟಿಫೀಕೇಷನ್‌ ಆರೋಪಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಿ’ ಎಂದು ಕೋರಿ ಯಡಿಯೂರಪ್ಪ ಈ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT