ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿಯ ಮಧ್ಯಪ್ರವೇಶದಿಂದ ಮಾತ್ರ ಈ ಯೋಜನೆ ಅನುಷ್ಠಾನ ಸಾಧ್ಯ. ಆದರೆ, ರಾಜ್ಯದ ಸಂಸದರು ಪ್ರಧಾನಿ ಮೇಲೆ ಯಾವುದೇ ಒತ್ತಡ ಹೇರುತ್ತಿಲ್ಲ. ಗೋವಾ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿಯೋಗ ಕರೆದೊಯ್ಯುತ್ತೇವೆ ಎಂದು ನಾಟಕವಾಡುತ್ತಿದ್ದಾರೆ’ ಎಂದು ಆರೋಪಿಸಿದರು.