ಆಂಧ್ರಪ್ರದೇಶದ ಈ ಸೋದರರು, ತಾಯಿ ಜತೆ 15 ವರ್ಷಗಳಿಂದ ಕರಿಯಣ್ಣನಪಾಳ್ಯದಲ್ಲಿ ನೆಲೆಸಿದ್ದರು. ಆಸ್ಕರ್ ಕೊಳಾಯಿ ರಿಪೇರಿ ಕೆಲಸ ಮಾಡುತ್ತಿದ್ದರೆ, ರಾಯ್ಸನ್ ಪೇಂಟರ್ ಆಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ರಾಯ್ಸನ್ ಅವರು ರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆಸ್ಕರ್, ಮನೆಗೆ ಬೀಗ ಹಾಕಿಕೊಂಡು ಮೊಟ್ಟೆ ತರಲು ಅಂಗಡಿಗೆ ಹೋಗಿದ್ದರು. 8.30ರ ಸುಮಾರಿಗೆ ಆಸ್ಪತ್ರೆಯಿಂದ ಮರಳಿದ ರಾಯ್ಸನ್, ಮನೆಗೆ ಬೀಗ ಹಾಕಿದ್ದರಿಂದ ಅಣ್ಣನಿಗೆ ಕರೆ ಮಾಡಿದ್ದರು. ಆದರೆ, ಅವರು ಮೊಬೈಲನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು.