ಪ್ರಕರಣದ ಅದೇಶ ಶುಕ್ರವಾರ ಪ್ರಕಟವಾಗಲಿರುವ ಕಾರಣ ಎಸಿಬಿ ಕಚೇರಿಯಲ್ಲಿ ಅಧಿಕಾರಿಗಳು ಗುರುವಾರ ರಾತ್ರಿ ತುರ್ತು ಸಭೆ ನಡೆಸಿದರು. ಮುಂದಿನ ನಡೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಗೃಹ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೂ ಚರ್ಚೆ ನಡೆಸಿದ್ದಾರೆ ಎಂದೂ ಮೂಲಗಳು ತಿಳಿಸಿವೆ.