ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅನುಸರಿಸುವುದರ ಮೂಲಕ ಹೆಚ್ಚಿನ ಇಳುವರಿ ಪಡೆಯಬೇಕು. ಕೃಷಿಕರ ಬದುಕು ಹಸನುಗೊಳಿಸುವ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಹೆಚ್ಚಿನ ಸಂಖ್ಯೆಯ ರೈತರು ಅದರ ಲಾಭ ಪಡೆದುಕೊಂಡಿದ್ದಾರೆ. ಟ್ರ್ಯಾಕ್ಟರ್ ಖರೀದಿಸಿರುವ ಹಾಗೂ ಹೊಸದಾಗಿ ಮಾವು, ಬೇವು, ಸೀಬೆ, ಕನಕಾಂಬರ, ಮಲ್ಲಿಗೆ ಮುಂತಾದ ಆರ್ಥಿಕ ಬೆಳೆಗಳನ್ನು ಬೆಳೆದಿರುವ ರೈತರಿಗೆ ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.