ಪಾಕ್ ಹೇಳಿದ್ದೇನು?
ಕಾಶ್ಮೀರ ಸಮಸ್ಯೆಗೆ ವಿಷಯದಲ್ಲಿ ವಿಶ್ವಸಂಸ್ಥೆ ಮಧ್ಯೆ ಪ್ರವೇಶಿಸಬೇಕು. ಈ ಸಂಬಂಧ ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಣಯವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಪಾಕಿಸ್ತಾನದ ಪ್ರಧಾನಿ ಶಾಹೀದ್ ಅಬ್ಬಾಸಿ ಹೇಳಿದ್ದರು,. ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಅಬ್ಬಾಸಿ, ಭಯೋತ್ಪಾದಕ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ನಾವು ವಿಫಲವಾಗಿಲ್ಲ. ಪಾಕ್ನಲ್ಲಿ ಉಗ್ರರ ಅಡಗುತಾಣಗಳಿಲ್ಲ. ಗಡಿಯ ಅಶಾಂತಿಗೆ ನಾವು ಕಾರಣರಲ್ಲ. ಜನವರಿಯಿಂದ ಇಲ್ಲಿಯವರೆಗೆ 600ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘನೆಯಾಗಿದ್ದರೂ ನಾವು ಸುಮ್ಮನಿದ್ದೇವೆ. ಭಾರತದ ಪ್ರಚೋದನೆಗೆ ನಮ್ಮ ಸೇನೆ ದಿಟ್ಟ ಉತ್ತರ ನೀಡಲಿದೆ.