ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ–ಶಾಸಕರ ಕಾರು ಡಿಕ್ಕಿ

Last Updated 22 ಸೆಪ್ಟೆಂಬರ್ 2017, 7:38 IST
ಅಕ್ಷರ ಗಾತ್ರ

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಶಿರಮಳ್ಳಿ ಗ್ರಾಮದ ಬಳಿ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹಾಗೂ ಶಾಸಕ ಎಂ.ಕೆ.ಸೋಮಶೇಖರ್‌ ಅವರ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಎರಡೂ ಕಾರುಗಳಿಗೂ ಹಾನಿಯಾಗಿದೆ. ಸಚಿವರ ಕಾರಿನಲ್ಲಿದ್ದ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿ ಹಾಗೂ ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಹಾಗೂ ಶಾಸಕರು ಎಚ್‌.ಡಿ.ಕೋಟೆಗೆ ತೆರಳಿದ್ದರು.

ಬಾಗಿನ ಅರ್ಪಿಸಿ ಮೈಸೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನಲ್ಲಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಭಾಗದಲ್ಲಿ ಚಲಿಸುತ್ತಿದ್ದ ಸೋಮಶೇಖರ್‌ ಅವರ ಕಾರಿಗೆ ಸಚಿವರ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮುಂಭಾಗ ಜಖಂಗೊಂಡಿದೆ. ಶಾಸಕರು ಮತ್ತೊಂದು ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT