ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರ್ಮೀತ್ ಜತೆ ಬಿಜೆಪಿಗೆ ಯಾವುದೇ ನಂಟು ಇಲ್ಲ: ಕೇಶವ್ ಪ್ರಸಾದ್ ಮೌರ್ಯ

Last Updated 22 ಸೆಪ್ಟೆಂಬರ್ 2017, 8:53 IST
ಅಕ್ಷರ ಗಾತ್ರ

ಮಥುರಾ: ಅತ್ಯಾಚಾರ ಪ್ರಕರಣದ ಅಪರಾಧಿ, ದೇವಮಾನವ ಗುರ್ಮೀತ್ ರಾಮ್ ರಹೀಂ ಸಿಂಗ್ ಜತೆ ಬಿಜೆಪಿ ನಾಯಕರಿಗೆ ಯಾವುದೇ ನಂಟು ಇಲ್ಲ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ. ಬಿಜೆಪಿ ನಾಯಕರು ಗುರ್ಮೀತ್ ಸಿಂಗ್ ಜತೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ಅದಕ್ಕೆ ಸಾಕ್ಷಿ ಎಂಬಂತೆ ಕೆಲವು ಫೋಟೊಗಳನ್ನು ಸಮಾಜವಾದಿ ಪಕ್ಷ ನಾಯಕ ಅಖಿಲೇಶ್ ಸಿಂಗ್ ಯಾದವ್ ಬಹಿರಂಗ ಪಡಿಸಿದ್ದರು.

ಈ  ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಮೌರ್ಯ ಅವರು ಅಖಿಲೇಶ್ ಖಿನ್ನತೆಗೊಳಗಾಗಿದ್ದಾರೆ ಎಂದಿದ್ದಾರೆ.

ಗುರ್ಮೀತ್ ಜತೆ ನಂಟು ಇದೆ ಎಂಬ ಆರೋಪನ್ನು ತಿರಸ್ಕರಿಸಿದ ಮೌರ್ಯ, ಬಿಜೆಪಿ ಇದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಆದಿತ್ಯನಾಥ ಅವರ ಸರ್ಕಾರ ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಉತ್ತರಪ್ರದೇಶದಲ್ಲಿ ಬಿಜಿಪಿ ಸರ್ಕಾರ ಅಧಿಕಾರಕ್ಕೇರಿ 6 ತಿಂಗಳುಗಳಾದುವು. ಈ ಅವಧಿಯಲ್ಲಿ ನಮ್ಮ ಸರ್ಕಾರ ವಿಐಪಿ ಸಂಸ್ಕೃತಿಗೆ ಮಣೆ ಹಾಕಿಲ್ಲ ಎಂದು ಮೌರ್ಯ  ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT