ಮಥುರಾ: ಅತ್ಯಾಚಾರ ಪ್ರಕರಣದ ಅಪರಾಧಿ, ದೇವಮಾನವ ಗುರ್ಮೀತ್ ರಾಮ್ ರಹೀಂ ಸಿಂಗ್ ಜತೆ ಬಿಜೆಪಿ ನಾಯಕರಿಗೆ ಯಾವುದೇ ನಂಟು ಇಲ್ಲ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ. ಬಿಜೆಪಿ ನಾಯಕರು ಗುರ್ಮೀತ್ ಸಿಂಗ್ ಜತೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ಅದಕ್ಕೆ ಸಾಕ್ಷಿ ಎಂಬಂತೆ ಕೆಲವು ಫೋಟೊಗಳನ್ನು ಸಮಾಜವಾದಿ ಪಕ್ಷ ನಾಯಕ ಅಖಿಲೇಶ್ ಸಿಂಗ್ ಯಾದವ್ ಬಹಿರಂಗ ಪಡಿಸಿದ್ದರು.