ಹರಿಹರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗಿರಿಯಮ್ಮ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಸಿಬ್ಬಂದಿ ಗುರುವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.
ಕಾಲೇಜಿನ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಶಿವಮೊಗ್ಗ ರಸ್ತೆ, ರಾಣಿ ಚೆನ್ನಮ್ಮ ವೃತ್ತ, ಮುಖ್ಯ ರಸ್ತೆ ಮೂಲಕ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡಿತು. ಪ್ರತಿಭಟನಾಕಾರರು ಅಲ್ಲಿ ಮಾನವ ಸರಪಳಿ ರಚಿಸಿದರು.
ಗೌರಿ ಲಂಕೇಶ್ ಹತ್ಯೆ ಪ್ರಜಾಪ್ರಭುತ್ವದ ಕಗ್ಗೊಲೆ. ವಿಚಾರಗಳನ್ನು ಬಂದೂಕಿನಿಂದ ಹತ್ತಿಕ್ಕುವುದು ನಿಲ್ಲಬೇಕು. ಈ ಕೃತ್ಯ ಎಸಗಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಜಿ. ನಳಿನಾ ಅವರಿಗೆ ಮನವಿ ಸಲ್ಲಿಸಿದರು.