ನವದೆಹಲಿ: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರಿಗೆ ದಸರಾ ಆಚರಣೆಗಾಗಿ ಎರಡು ದಿನ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
ದಸರಾ ಆಚರಣೆ ಅಂಗವಾಗಿ ಸೆಪ್ಟೆಂಬರ್ 29 ಹಾಗೂ 30ರಂದು ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಹಾಗೂ ಅಶೋಕ್ ಭೂಷಣ್ ಅವರ ಪೀಠ ಅನುಮತಿ ನೀಡಿತು.
2011ರ ಸೆಪ್ಟೆಂಬರ್ 5ರಂದು ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿ ಅವರಿಗೆ, ಬಳ್ಳಾರಿ, ಅನಂತಪುರ ಮತ್ತು ಕಡಪಗಳಿಗೆ ತೆರಳದಂತೆ ಷರತ್ತು ವಿಧಿಸಿ 2015ರ ಜನವರಿ 21ರಂದು ಜಾಮೀನು ನೀಡಲಾಗಿದೆ.