ಸರ್ಕಾರವು ಸಂಪುಟ ಉಪ ಸಮಿತಿ ರಚಿಸಿದ್ದು, ಈ ಬಗ್ಗೆ ಚರ್ಚಿಸಲು ಇದೇ 25ರಂದು ಸಭೆ ಆಯೋಜಿಸಲಾಗಿದೆ. ಅರ್ಜಿದಾರರನ್ನೂ ಸಭೆಗೆ ಆಹ್ವಾನಿಸಲಾಗಿದ್ದು, ಆಕ್ಷೇಪಣೆ ಮತ್ತು ಬೇಡಿಕೆ ಪಟ್ಟಿ ತರಲು ತಿಳಿಸಲಾಗಿದೆ. ಪ್ರಕರಣದ ಇತ್ಯರ್ಥಕ್ಕಾಗಿ 6 ತಿಂಗಳ ಕಾಲಾವಕಾಶ ನೀಡಬೇಕು ಎಂದು ರಾಜ್ಯದ ಪರ ವಕೀಲ ಬಸವಪ್ರಭು ಪಾಟೀಲ ಮನವಿ ಮಾಡಿದರು. ಮನವಿ ಪುರಸ್ಕರಿಸದ ಪೀಠ 4 ತಿಂಗಳಲ್ಲಿ ಪ್ರಕರಣ ಇತ್ಯರ್ಥಪಡಿಸುವಂತೆ ಸೂಚಿಸಿತು.