ಕರಕುಶಲ ಉತ್ಪನ್ನಗಳಿಗೆ ತೆರಿಗೆ: ಸ್ವರಾಜ್ ಇಂಡಿಯಾ ಮುಖಂಡ ಹಾಗೂ ಸಾಹಿತಿ ದೇವನೂರು ಮಹಾದೇವ ಮಾತನಾಡಿ, ‘ಕರಕುಶಲ ಉತ್ಪನ್ನಗಳಿಗೆ ತೆರಿಗೆ ವಿಧಿಸಲು ಮುಂದಾಗಿರುವ ಸರ್ಕಾರಗಳ ವಿರುದ್ಧ ರಾಜ್ಯದಲ್ಲಿ ಚಳವಳಿ ಆರಂಭವಾಗಿದೆ. ಉದ್ಯೋಗ ಮತ್ತು ಸ್ವಾವಲಂಬನೆಯೇ ಅಭಿವೃದ್ಧಿ ಎಂಬ ಮಂತ್ರವನ್ನು ಈ ದೇಶ ಜಪಿಸಬೇಕು’ ಎಂದರು.