ಬೆಂಗಳೂರು: ‘ನರೇಂದ್ರ ಮೋದಿ ಫ್ಯಾನ್ಸ್ ಫ್ರಂ ಕರುನಾಡು’ ಫೇಸ್ ಬುಕ್ ಪೇಜ್ನಲ್ಲಿ ಸುಶ್ಮಿತಾ ಸಪ್ತರ್ಷಿ ಎಂಬ ಮಹಿಳೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಬಗ್ಗೆ ಅಪಪ್ರಚಾರ ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಎಚ್.ಎಂ. ರಮೇಶಗೌಡ ನಗರ ಪೊಲೀಸ್ ಆಯುಕ್ತರಿಗೆ ಶುಕ್ರವಾರ ದೂರು ನೀಡಿದ್ದಾರೆ.