ಕಲಾ ವಿಭಾಗದ ವಿದ್ಯಾರ್ಥಿನಿ ಗುರುವಾರ ಸಂಜೆ ತರಗತಿಯಿಂದ ಹಾಸ್ಟೆಲ್ಗೆ ತೆರಳುವ ವೇಳೆ ಮೂವರು ಯುವಕರು ಕಿರುಕುಳ ನೀಡಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ವಿಶ್ವವಿದ್ಯಾಲಯದ ಅಧಿಕಾರಿಗೆ ದೂರು ನೀಡಿದ್ದಳು. ಆದರೆ ಪ್ರಧಾನಿ ನಗರಕ್ಕೆ ಭೇಟಿ ನೀಡುವ ಕಾರ್ಯಕ್ರಮ ಇದ್ದುದರಿಂದ ಈ ವಿಷಯ ‘ಮರೆಯಬೇಕು’ ಎಂದು ಅವರು ಹೇಳಿದ್ದರು ಎಂದು ವರದಿಯಾಗಿದೆ.