ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಅರ್ಜಿದಾರರ ಪರ ವಾದ ಮಂಡಿಸಿ, ನೋಟಿಸ್ಗೆ ತಡೆ ನೀಡುವಂತೆ ಕೋರಿದರು. ಆಲಿಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ, ‘ವಾರ್ತಾಭಾರತಿ’ ಪತ್ರಿಕೆಗೆ ನೀಡಿದ್ದ ಷೋಕಾಸ್ ನೋಟಿಸ್ಗೆ ತಡೆ ನೀಡಿದರು. ಪ್ರತಿವಾದಿಗಳಾದ ಮಂಗಳೂರು ಉಪ ವಿಭಾಗಾಧಿಕಾರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೆ ಆದೇಶಿಸಿದರು.