ಶಿರಗುಪ್ಪಿ, ಮೈಗೂರು, ಮುತ್ತೂರು, ಕಂಕಣವಾಡಿ ಸೇರಿದಂತೆ ಒಟ್ಟು 27 ಗ್ರಾಮಗಳ ಜನರು ನದಿ ದಡಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಪ್ರವಾಹ ಉಂಟಾದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಜಮಖಂಡಿಯ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಗೆ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.