ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆಗೆ ವಿರೋಧ: ಅ.25ಕ್ಕೆ ಬೃಹತ್ ಸಮಾವೇಶ

ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಳ
Last Updated 23 ಸೆಪ್ಟೆಂಬರ್ 2017, 7:19 IST
ಅಕ್ಷರ ಗಾತ್ರ

ಶಿರಸಿ: ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಳ ವಿರೋಧ ವ್ಯಕ್ತಪಡಿಸಿದೆ.

ಶನಿವಾರ ಸುದ್ದಿಗೋಷ್ಠಿ ನಡೆಸಿ ಮಹಾಮಂಡಳದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ದೇವಾಲಯಗಳನ್ನು ಸರ್ಕಾರೀಕರಣ ಮಾಡುವ ಮೂಲಕ ರಾಜ್ಯ ಸರ್ಕಾರ ಧಾರ್ಮಿಕ ರಾಜಕಾರಣ ಮಾಡುತ್ತಿದೆ. ಈ ಸಂಬಂಧ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇದ್ದಾಗ ಉತ್ತರ ಕನ್ನಡ ಜಿಲ್ಲೆಯಲ್ಲಿ ತರಾತುರಿಯಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ.

ಸರ್ಕಾರದ ಈ ನಡೆ ವಿರುದ್ಧ ಅಕ್ಟೋಬರ್ 25ರಂದು ದೇವಾಲಯಗಳ ಪ್ರಮುಖರ ಉಪಸ್ಥಿತಿಯಲ್ಲಿ ಶಿರಸಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮಹಾಂಡಳದ ಪ್ರಮುಖರಾದ ವೆಂಕಟೇಶ ನಾಯ್ಕ, ಟಿ.ಜಿ. ನಾಡಿಗೇರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT