ಶಿರಸಿ: ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಳ ವಿರೋಧ ವ್ಯಕ್ತಪಡಿಸಿದೆ.
ಶನಿವಾರ ಸುದ್ದಿಗೋಷ್ಠಿ ನಡೆಸಿ ಮಹಾಮಂಡಳದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ದೇವಾಲಯಗಳನ್ನು ಸರ್ಕಾರೀಕರಣ ಮಾಡುವ ಮೂಲಕ ರಾಜ್ಯ ಸರ್ಕಾರ ಧಾರ್ಮಿಕ ರಾಜಕಾರಣ ಮಾಡುತ್ತಿದೆ. ಈ ಸಂಬಂಧ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಇದ್ದಾಗ ಉತ್ತರ ಕನ್ನಡ ಜಿಲ್ಲೆಯಲ್ಲಿ ತರಾತುರಿಯಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ.
ಸರ್ಕಾರದ ಈ ನಡೆ ವಿರುದ್ಧ ಅಕ್ಟೋಬರ್ 25ರಂದು ದೇವಾಲಯಗಳ ಪ್ರಮುಖರ ಉಪಸ್ಥಿತಿಯಲ್ಲಿ ಶಿರಸಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮಹಾಂಡಳದ ಪ್ರಮುಖರಾದ ವೆಂಕಟೇಶ ನಾಯ್ಕ, ಟಿ.ಜಿ. ನಾಡಿಗೇರ ತಿಳಿಸಿದರು.