ತುಮಕೂರಿನ ದೊಡ್ಡಗುಣಿ ಮಠದ ರೇಣುಕಾ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ನವರಾತ್ರಿ ಸಂದರ್ಭದಲ್ಲಿ ದುರ್ಗೆಯನ್ನು ಆರಾಧಿಸಿದರೆ ದೋಷಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ. ಈ ಆಚರಣೆ ಚಂದ್ರವನ ಆಶ್ರಮದಲ್ಲಿ ಹಲವು ವರ್ಷಗಳಿಂದ ಅನೂಚಾನವಾಗಿ ನಡೆಯುತ್ತಿದ್ದು, ವಿವಿಧೆಡೆಗಳಿಂದ ಸಾಧು, ಸಂತರು ಪಾಲ್ಗೊಳ್ಳಲಿದ್ದಾರೆ’ ಎಂದರು.