ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ಗುಣಮುಖರಾಗಲಿ: ಪೂಜೆ

Last Updated 23 ಸೆಪ್ಟೆಂಬರ್ 2017, 10:05 IST
ಅಕ್ಷರ ಗಾತ್ರ

ರಾಮನಗರ: ಶಾಸಕ ಎಚ್‌.ಡಿ. ಕುಮಾರಸ್ವಾಮಿ ಅವರು ಶನಿವಾರ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಇಲ್ಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಜೆಡಿಎಸ್‌ ಕಾರ್ಯಕರ್ತರು ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡೇಶ್ವರಿ ದೇವಿಯ ಮೂರ್ತಿಗೆ ವಿಶೇಷ ಅಲಂಕಾರ, ಅಭಿಷೇಕ ಮಾಡುವುದರ ಜೊತೆಗೆ ದೇಗುಲದ ಆವರಣದಲ್ಲಿ 101 ಈಡು ಗಾಯಿ ಒಡೆದು ಪೂಜೆ ಸಲ್ಲಿಸಲಾಯಿತು.

ಯುವ ಜನತಾದಳದ ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಕ್ಷೇತ್ರದ, ನಾಡಿನ ಜನತೆಗೆ ಹತ್ತು ಹಲವು ಜನಪ್ರಿಯ ಯೋಜನೆಗಳನ್ನು ನೀಡಿದ್ದಾರೆ. ಅವರು ಹೃದಯ ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಮರಳಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಆಗಬೇಕು ಎಂದು ಬೇಡಿಕೊಳ್ಳಲಾಯಿತು.

ಇನ್ನೂ ಹದಿನೈದು ದಿನಗಳ ಬಳಿಕ ಅವರು ಮತ್ತೆ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ’ ಎಂದರು.
ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಕಾರ್ಯಾಧ್ಯಕ್ಷ ದೊರೆಸ್ವಾಮಿ, ಅಜಯ್ ದೇವೇಗೌಡ, ಗೌಡಯ್ಯನದೊಡ್ಡಿ ಕೃಷ್ಣಪ್ಪ, ಬಿಳಗುಂಬ ಕಿರಣ್‌ , ಜಯಕುಮಾರ್ ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT