ಈಶ್ವರಪ್ಪ ಆಪ್ತ ಕಾರ್ಯದರ್ಶಿ ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೊಲೀಸ್ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಪಹರಣ ಸಣ್ಣ ಪ್ರಕರಣವಲ್ಲ. ಯಡಿಯೂರಪ್ಪಗೆ ಸಂಬಂಧಿತ ಪ್ರಕರಣಗಳಲ್ಲಿ ಯಾವುದೇ ರಾಜಕೀಯವಿಲ್ಲ. ಅಪಹರಣ ಷಡ್ಯಂತ್ರ ನಡೆದಿರುವುದು ಅವರ ಮನೆಯಲ್ಲಿಯೇ. ಹೀಗಾಗಿ ಯಡಿಯೂರಪ್ಪ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ತನಿಖೆಗಳು ನಡೆಯುತ್ತಿವೆ ಎಂದರು.