ಸಮೀಪದ ತೊಂಡೂರಿನ ಪ್ಯಾಡಿಂಗ್ಟನ್ ರೆಸಾರ್ಟ್ನಲ್ಲಿ ಶನಿವಾರ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ಪಕ್ಷದ ಹಿತಾಸಕ್ತಿಯ ರಕ್ಷಣೆಯೇ ನಮ್ಮ ಬಣದ ಉದ್ದೇಶ. ಪಕ್ಷಕ್ಕೆ ವಿರುದ್ಧವಾಗಿರುವ ವ್ಯಕ್ತಿಗಳನ್ನು ಸಹಿಸುವುದಿಲ್ಲ’ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ವಿರುದ್ಧ ಕಿಡಿಕಾರಿದರು.