ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪೌರ ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗುವುದನ್ನು ಕಡ್ಡಾಯಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಜಾರಿಗೊಳಿಸಿದೆ.
ಸರಬರಾಜುದಾರರು ಮತ್ತು ಗುತ್ತಿಗೆದಾರರ ಅಧೀನದಲ್ಲಿ ತೊಡಗಿಸಿಕೊಂಡಿರುವ ಎಲ್ಲ ಪೌರ ಕಾರ್ಮಿಕರು, ಆಟೊ ಸಹಾಯಕರು, ಕಾಂಪ್ಯಾಕ್ಟರ್ ಲೋಡರ್ಗಳು, ಚಾಲಕರಿಗೆ ಇದು ಅನ್ವಯ ಆಗಲಿದೆ. ಇವರು ಇನ್ನು ಒಂದು ವರ್ಷದವರೆಗೆ ಮುಷ್ಕರ ಹೂಡುವುದನ್ನು ನಿಷೇಧಿಸಲಾಗಿದೆ.
ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು, ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾಗುವುದನ್ನು ತಡೆಗಟ್ಟುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಆದೇಶ ತಿಳಿಸಿದೆ.
2016ರಿಂದ ಕಸ ವಿಲೇವಾರಿಯನ್ನು ಎಸ್ಮಾ ವ್ಯಾಪ್ತಿಗೆ ತರಲಾಗಿದೆ.