ಸಿಂಗ್ ಅವರು ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯಲ್ಲಿ ಸುದ್ದಿ ಸಂಪಾದಕರಾಗಿದ್ದರು. ಅವರು ದ ಟ್ರಿಬ್ಯೂನ್ ಮತ್ತು ದ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ಪಂಜಾಬ್, ಹರಿಯಾಣ ಮತ್ತು ಚಂಡೀಗಡದ ಮಾಧ್ಯಮ ಪ್ರತಿನಿಧಿಗಳು ಈ ಹತ್ಯೆಯನ್ನು ಖಂಡಿಸಿದ್ದಾರೆ. ತ್ವರಿತವಾಗಿ ತನಿಖೆ ನಡೆಸಿ ಹಂತಕರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.