‘ವಿನಯ್ ಅಪಹರಣಕ್ಕೆ ಯತ್ನ ಹಾಗೂ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ವಿರೋಧವಿಲ್ಲ. ಆದರೆ, ಪ್ರಕರಣದ ಹೆಸರಿನಲ್ಲಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು ಖಂಡನೀಯ. ಅವರ ವಿಚಾರಣೆ ಅಗತ್ಯವಿದ್ದರೆ, ಅವರ ಮನೆಗೆ ಹೋಗಿ ಪೊಲೀಸರು ಮಾಹಿತಿ ಪಡೆದುಕೊಳ್ಳಲಿ. ಅವರನ್ನು ಠಾಣೆಗೆ ಕರೆಸಿ, ಗೌರವಕ್ಕೆ ಧಕ್ಕೆ ತರುವುದು ಸರಿಯಲ್ಲ. ಕೂಡಲೇ ಪೊಲೀಸರು, ನೋಟಿಸ್ ಹಿಂಪಡೆಯಬೇಕು’ ಎಂದು ಅವರು ಒತ್ತಾಯಿಸಿದರು.