ಶ್ರೀನಗರ: ಬಾರಾಮುಲ್ಲ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪ ಭಾರತದ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾನುವಾರ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಉಗ್ರ ಗುಂಡೇಟಿಗೆ ಬಲಿಯಾಗಿದ್ದಾನೆ.
ಕಾಶ್ಮೀರದ ಉರಿ ಸುತ್ತಲಿನ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಹೊಂದಿದ್ದ ಭದ್ರತಾ ಪಡೆ ಶೋಧನಾ ಕಾರ್ಯ ನಡೆಸಿದೆ. ಉಗ್ರರು ದಾಳಿಗೆ ಮುಂದಾಗುತ್ತಿದ್ದಂತೆ ಯೋಧರು ಪ್ರತಿ ದಾಳಿ ನಡೆಸಿದ್ದು, ಒಬ್ಬ ಉಗ್ರ ಮೃತಪಟ್ಟಿದ್ದಾನೆ.
ಸುತ್ತಲಿನ ಸ್ಥಳೀಯರನ್ನು ಸ್ಥಳಾಂತರಿಸಲಾಗಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿರುವುದಾಗಿ ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.