ಕೆರೆಗೆ ನೀರು ತುಂಬಿಸುವುದು ಸರ್ಕಾರದ ಆದ್ಯತೆ ಕೆಲಸ:
ಹವಾಮಾನ ವೈಪರೀತ್ಯದಿಂದಾಗಿ ಮಳೆ ಪ್ರಮಾಣ ಕ್ಷೀಣಿಸಿದೆ. ಅಕಾಲಿಕ ಮಳೆಗಾಲದಿಂದಾಗಿ ಕೃಷಿ ಚಟುವಟಿಕೆ ಕುಂಠಿತಗೊಂಡಿದೆ. ಅಂತರ್ಜಲ ಪಾತಾಳಕ್ಕಿಳಿದಿದೆ. ಇವೆಲ್ಲ ಸಮಸ್ಯೆಗಳಿಗೆ ಏಕೈಕ ಪರಿಹಾರ ಎಂಬಂತೆ ಸಿರಿಗೆರೆಯ ಶಿವಮೂರ್ತಿ ಶಿವಾಚಾರ್ಯ ಅವರು ಕೈಗೊಂಡಿರುವ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಸರ್ಕಾರ ಆದ್ಯತೆಯ ಕಾರ್ಯವಾಗಿ ಪರಿಗಣಿಸಲಿದೆ' ಎಂದರು.