‘ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಆದರೆ, ಸಮಾಜವನ್ನು ನಿರ್ಲಕ್ಷ್ಯ ಮಾಡಿತ್ತು. ಇದರಿಂದ ಬೇಸರಗೊಂಡು ಆ ಪಕ್ಷದಿಂದ ಹೊರಗೆ ಬಂದೆ. ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ಆಹ್ವಾನಿಸಿದ್ದರು. ಸಮುದಾಯದ ಹಿತದೃಷ್ಟಿಯಿಂದಾಗಿ ಬಿಜೆಪಿಗೆ ಸೇರ್ಪಡೆಗೊಂಡೆ’ ಎಂದು ತಿಳಿಸಿದರು.