’ ವೈದ್ಯಕೀಯ ಕಾಲೇಜಿನ ಪ್ರವೇಶದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಈಗಾಗಲೇ ಇಬ್ಬರು ಐಎಎಸ್ ಅಧಿಕಾರಿಗಳು ಸೇರಿದಂತೆ ಪುದುಚೇರಿ ಸರ್ಕಾರದ ಆರು ಅಧಿಕಾರಿಗಳ ವಿರುದ್ಧ ಸಿಬಿಐ, ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲು ಮಾಡಿದೆ. ಈ ಅಧಿಕಾರಿಗಳು ಹಗರಣದ ಪ್ರಮುಖ ಆರೋಪಿಗಳು ಎಂದು ಸಿಬಿಐ ಹೇಳಿದೆ. ಹೀಗಿರುವಾಗ ಲೆಫ್ಟಿನೆಂಟ್ ಗವರ್ನರ್ನಂಥ ಸಾಂವಿಧಾನಿಕ ಹುದ್ದೆಯಲ್ಲಿ ಇರುವವರಿಗೆ ಮುಖ್ಯಮಂತ್ರಿಗಳು ಬೆದರಿಕೆ ಹಾಕುತ್ತಿರುವುದು ಬಹಳ ವಿಚಿತ್ರವಾಗಿದೆ’ ಎಂದು ಬೇಡಿ ಹೇಳಿದ್ದಾರೆ.