ಮಂಗಳೂರಿನಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸುವ ಭರದಲ್ಲಿ ಸಚಿವರು ಈ ರೀತಿ ಹೇಳಿಕೆ ಕೊಟ್ಟರು. ನಂತರ ಸಮರ್ಥಿಸುತ್ತಾ, ‘ಮದ್ಯಪಾನ ಅನ್ನೋದು ಇತ್ತೀಚಿನ ಸಂಸ್ಕೃತಿ ಅಲ್ಲ. ಇದು ತಲೆತಲಾಂತರಗಳಿಂದ ನಡೆದುಕೊಂಡು ಬಂದಿದೆ. ದೇವಾನುದೇವತೆಗಳೇ ಮದ್ಯ ಸೇವಿಸುತ್ತಿದ್ದರು. ಹಾಗೆಂದು, ನಕಲಿ ಮಾಲು ಸೇವಿಸಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ, ಮದ್ಯ ಸೇವಿಸುವವರಿಗೆ ಸರ್ಕಾರ ಉತ್ತಮ ಮದ್ಯ ಒದಗಿಸುತ್ತಿದೆ’ ಎನ್ನುತ್ತಾ ಮುಗುಳ್ನಗೆ ಬೀರಿದರು.