ವಿಶ್ವವಿದ್ಯಾಲಯದ ಸುಧಾರಣೆ, ಉಳಿಸಿಕೊಳ್ಳಲು ಏನು ಮಾಡಬೇಕು ಎಂಬ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾ ಅಧ್ಯಕ್ಷತೆಯಲ್ಲಿ ವ್ಹಿ.ಬಿ. ಕುಟಿನ್ಹೊ, ಬಿ.ಕೆ.ರವಿ, ಎಸ್.ಎ. ಕೋರಿ ಸದಸ್ಯರಾಗಿರುವ ಸಮಿತಿ ರಚಿಸಿ, ನವೆಂಬರ್ 15ರೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಮಿತಿ ನೀಡಲಿರುವ ವರದಿ ಆಧರಿಸಿ ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ ಎಂದರು.