ನರೇಂದ್ರ ಮೋದಿ ಅವರು ಕೇವಲ ಬಿಜೆಪಿ ಪಕ್ಷದ ಪ್ರಧಾನಿಯಲ್ಲ. ಅವರು ದೇಶದ ಪ್ರಧಾನಿ. ದೇಶದ ಪ್ರತಿಯೊಬ್ಬ ಪ್ರಜೆ ಅವರಿಗೆ ಗೌರವ ತೋರಿಸಬೇಕು. ಆದರೆ, ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವರು, ಪ್ರಧಾನಿ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ. ಇಂತಹ ಸಚಿವರನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ಆಗ್ರಹಿಸಿದರು.