ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಹಲವಾರು ರಾಜಕೀಯ ಪಕ್ಷಗಳ ಮುಖಂಡರು ಪ್ರತಿಪಾದಿಸುತ್ತಿದ್ದಾರೆ. ಈ ವಿವಾದಾತ್ಮಕ ವಿಷಯದ ಬಗ್ಗೆ ಪ್ರತಿಕ್ರಿಯಿಸಿರುವ ರಾಜೀವ್ ಕುಮಾರ್, ಖಾಸತಿ ವಲಯದಲ್ಲಿ ಉದ್ಯೋಗ ಮೀಸಲಾತಿ ಇರಬಾರದು ಎನ್ನುವುದು ತಮ್ಮ ನಿಲುವಾಗಿದೆ ಎಂದು ಹೇಳಿದ್ದಾರೆ.