ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ಡಿಪೋನಲ್ಲಿ ಸದ್ದಿಲ್ಲದೆ ನಡೆದ ಹೋಮ!

Last Updated 18 ಅಕ್ಟೋಬರ್ 2017, 7:50 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಪಟ್ಟಣದ ಕೆ.ಎಸ್‍.ಆರ್‌.ಟಿ.ಸಿ ಬಸ್‌ ಡಿಪೊದಲ್ಲಿ ಅಧಿಕಾರಿಗಳ ನೇತೃತ್ವದಲ್ಲಿ ಮಂಗಳವಾರ ಮುಂಜಾನೆ ಗಣಪತಿ ಹೋಮ ನಡೆಸಲಾಗಿದೆ.

ಡಿಪೊದ ಬಸ್‌ಗಳು ಇತ್ತೀಚೆಗೆ ಹೆಚ್ಚಾಗಿ ಅಪಘಾತಕ್ಕೀಡಾಗುತ್ತಿವೆ. ಹೀಗಾಗಿ ವಿಘ್ನ ನಿವಾರಣೆಗಾಗಿ ಗಣಪತಿ ಹೋಮ ಆಯೋಜಿಸಲಾಗಿತ್ತು. ಇದಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ.

ಡಿಪೊ ವ್ಯವಸ್ಥಾಪಕ ಜಯಕುಮಾರ್ ಅವರ ನೇತೃತ್ವದಲ್ಲಿ ಬೆಳಿಗ್ಗೆ 4.30ಕ್ಕೆ ಪೂಜೆ ನಡೆದಿದ್ದು, ಸಿಬ್ಬಂದಿಗೆ ಪ್ರಸಾದ ವಿತರಣೆ ಮಾಡಲಾಗಿದೆ.

ಈ ವಿಷಯ ಮಾಧ್ಯಮದವರಿಗೆ ತಿಳಿಯುವ ಹೊತ್ತಿಗೆ ಹೋಮ ನಡೆದ ಜಾಗವನ್ನು ಸ್ವಚ್ಛಗೊಳಿಸಲಾಗಿದೆ. ಈ ಬಗ್ಗೆ ವಿಚಾರಿಸಿದಾಗ, ಸ್ಥಳದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ. ಡಿಪೊದಲ್ಲಿ ಹೋಮ ನಡೆಸಿರುವ ದೃಶ್ಯಗಳು ಮಾಧ್ಯಮಗಳಿಗೆ ದೊರೆತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT