ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಶವ ಪತ್ತೆ

Last Updated 19 ಅಕ್ಟೋಬರ್ 2017, 7:35 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕುಕ್ಕರಹಳ್ಳಿ ಕೆರೆಯಲ್ಲಿ ವಿ.ದೀಕ್ಷಿತ್ (21) ಎಂಬ ವಿದ್ಯಾರ್ಥಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹುಣಸೂರು ಪಟ್ಟಣದ ನಿವಾಸಿಯಾಗಿರುವ ದೀಕ್ಷಿತ್‌, ಮೈಸೂರಿನ ಮಹಾರಾಜ ಕಾಲೇಜು ಪದವಿ ವಿದ್ಯಾರ್ಥಿ.

ನೀರಿನಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಕೆರೆಯ ಪ್ರವೇಶ ದ್ವಾರದಲ್ಲಿರುವ ಭದ್ರತಾ ಸಿಬ್ಬಂದಿಯ ಗಮನಕ್ಕೆ ತಂದಿದ್ದರು. ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಶವವನ್ನು ಹೊರತೆಗೆದರು. 

ಎರಡು ದಿನಗಳ ಹಿಂದೆ ವಿದ್ಯಾರ್ಥಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜಯಲಕ್ಷ್ಮಿಪುರಂ ಠಾಣೆಯ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT