ತೆಲಂಗಾಣದಲ್ಲಿ ಟಿಆರ್ಎಸ್–ಟಿಡಿಪಿ ಮಧ್ಯೆ ಮೈತ್ರಿ ಏರ್ಪಡಲಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಚುನಾವಣೆ ಸಮೀಪದಲ್ಲಿರುವಾಗ ಪಕ್ಷ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದರು. ಟಿಆರ್ಎಸ್ ಆರೋಪಿಸಿದ್ದ ಮತಕ್ಕಾಗಿ ಹಣ ಪ್ರಕರಣದಲ್ಲಿ ಜೈಲಿನಲ್ಲಿದ್ದು ಬಂದಿದ್ದ ರೇವಂತ್ ರೆಡ್ಡಿ ಅವರ ಮುನಿಸಿಗೆ ಇದು ಕಾರಣ. ತೆಲಂಗಾಣದಲ್ಲಿ ಪಕ್ಷವನ್ನು ಉಳಿಸಿಕೊಳ್ಳಲು ಟಿಆರ್ಎಸ್ ಜೊತೆ ಮೈತ್ರಿಗೆ ಚಂದ್ರಬಾಬು ನಾಯ್ಡು ಮುಂದಾದ ಕಾರಣ ರೇವಂತ್ ಕಾಂಗ್ರೆಸ್ ಜೊತೆ ಹೋಗಲು ನಿರ್ಧರಿಸಿದ್ದಾರೆ.