‘ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಬೇಕು. ಆಗ ಸದೃಢ ವ್ಯಕ್ತಿತ್ವ ನಿರ್ಮಾಣವಾಗಲು ಸಾಧ್ಯ. ಇದಕ್ಕೆ ಆತ್ಮವಿಶ್ವಾಸ ಬಹುಮುಖ್ಯ’ ಎಂದು ಕ್ರಿಕೆಟ್ ತರಬೇತುದಾರ ಪ್ಯಾಟ್ರಿಕ್ ರಾಜ್ಕುಮಾರ್ ಅವರು ತಿಳಿಸಿದರು. ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ.ವಿಜಯಕುಮಾರ್, ‘ವಿದ್ಯಾರ್ಥಿಗಳು ನಿಸ್ವಾರ್ಥ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ನಾಯಕತ್ವ ಗುಣಗಳನ್ನು ರೂಢಿಸಿಕೊಂಡು ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.