ಕಲಬುರ್ಗಿ ಜಿಲ್ಲೆಯ ಶಹಬಾದ್ನಿಂದ ಪರ್ಸಿ ಕಲ್ಲು ತುಂಬಿಕೊಂಡು ಮಹಾರಾಷ್ಟ್ರದ ಕರಾಡಕ್ಕೆ ತೆರಳುತ್ತಿದ್ದ ಟ್ರಕ್ ಪಲ್ಟಿಯಾಗಿದ್ದರಿಂದ, ಕಲ್ಲಿನಡಿ ಸಿಲುಕಿದ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಲ್ಲಿ ವಿಜಯಪುರ ಜಿಲ್ಲೆಯ 8 ಮಂದಿ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಯ ತಲಾ ಒಬ್ಬರು ಸೇರಿದ್ದಾರೆ.