ಬಳ್ಳಾರಿ: ‘ಸಮಾಜದ ನಿರೀಕ್ಷೆಗಳಿಗೆ ಪೊಲೀಸರು ಸ್ಪಂದಿಸಬೇಕು’ ಎಂದು ಐಜಿಪಿ ಎಸ್.ಮುರುಗನ್ ಸಲಹೆ ನೀಡಿದರು. ನಗರದಲ್ಲಿ ಜಿಲ್ಲಾ ಪರೇಡ್ ಮೈದಾನ
ದಲ್ಲಿ ಶನಿವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮಾತ ನಾಡಿದ ಅವರು, ‘ಅಪರಾಧಿಗಳ ಬಂಧನ, ಸಾರ್ವಜನಿಕರ ಆಸ್ತಿ, ಜೀವ ರಕ್ಷಣೆ, ಸಮಾಜಘಾತುಕ ಮತ್ತು ದೇಶ ವಿರೋಧಿ ಶಕ್ತಿಗಳ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಪೊಲೀಸರು ಜೀವವನ್ನು ಪಣವಾಗಿಟ್ಟು ಕೆಲಸ ಮಾಡುತ್ತಾರೆ. ಅಂಥ ಪೊಲೀಸರನ್ನು ಸಮಾಜವೂ ಗೌರವದಿಂದ ನಡೆಸಿಕೊಳ್ಳಬೇಕು’ ಎಂದರು.