ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಪ್ಪು ಜಯಂತಿ ಮಾಡೇ ಮಾಡ್ತಿವಿ: ಸಿದ್ದರಾಮಯ್ಯ

Last Updated 22 ಅಕ್ಟೋಬರ್ 2017, 8:37 IST
ಅಕ್ಷರ ಗಾತ್ರ

ಮಂಗಳೂರು: ಯಾರು ಬರಲಿ, ಬಿಡಲಿ ಟಿಪ್ಪು ಜಯಂತಿ ಮಾಡೇ ಮಾಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕ್ತೇವೆ. ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಸಚಿವ ಅನಂತಕುಮಾರ್ ಹೆಗಡೆಗೆ ತಿರುಗೇಟು ನೀಡಿದರು.

ಯಾರೊಬ್ಬರು ಕಾರ್ಯಕ್ರಮಕ್ಕೆ ಬರದೇ ಇದ್ದರೆ ಏನೂ ಅಗುವುದಿಲ್ಲ. ಕಾನೂನು, ಸುವ್ಯವಸ್ಥೆಗೆ ತೊಂದರೆ ಆಗುವುದಿಲ್ಲ. ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಸರ್ಕಾರದ ಶಿಷ್ಟಾಚಾರಕ್ಕೆ ಏನು ಹೇಳಬೇಕು: ರಾಜಶೇಖರಾನಂದ ಸ್ವಾಮೀಜಿ

ಟಿಪ್ಪು ಜಯಂತಿ ಎಂಬ ಹೊಲಸು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ನನ್ನ ಹೆಸರು ಹಾಕಬೇಡಿ ಎಂದು  ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದರು ಹಾಕುತ್ತೇವೆ ಎನ್ನುವ ಸರ್ಕಾರದ ಶಿಷ್ಟಾಚಾರಕ್ಕೆ ಏನು ಹೇಳಬೇಕು ಎಂದು ಮಂಗಳೂರಿನಲ್ಲಿ ಭಾನುವಾರ ನಡೆದ ಧರ್ಮ ಸಂಸದ್ ಜಿಲ್ಲಾ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ  ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT