ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಢೋಂಗಿಗಳ ಪಕ್ಷ: ಸಿದ್ದರಾಮಯ್ಯ ಲೇವಡಿ

Last Updated 22 ಅಕ್ಟೋಬರ್ 2017, 11:19 IST
ಅಕ್ಷರ ಗಾತ್ರ

ಮಂಗಳೂರು: ‘ಬಿಜೆಪಿ ಢೋಂಗಿಗಳ ಪಕ್ಷ. ಹೇಳುವುದೇ ಒಂದು, ಮಾಡುವುದೇ ಇನ್ನೊಂದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡಿದರು.

ಬಂಟ್ವಾಳದಲ್ಲಿ ಭಾನುವಾರ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಸಿಎಂ ಮಾತನಾಡಿದರು.

‘ಬಿಜೆಪಿ ನಾಯಕರು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರು ಮಾಡುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಆಧಾರರಹಿತ ಆರೋಪ ಮಾಡುವುದು ಕಳ್ಳರಿಂದ ಮಾತ್ರ ಸಾಧ್ಯ’ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

‘ಸಬ್ ಕಾ ಸಾಥ್- ಸಬ್ ಕಾ ವಿಕಾಸ್, ಮನ್ ಕಿ ಬಾತ್ ಕೇವಲ ಪ್ರಚಾರ. ಅವರಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಸರ್ಕಾರಕ್ಕೆ ಪತ್ರ ಬರೆದು, ತಮ್ಮ ಹೆಸರು ಹಾಕದಂತೆ ಹೇಳುತ್ತಾರೆ. ಇದು ಸಂವಿಧಾನದ ಮೇಲಿರುವ ಗೌರವವೇ’ ಎಂದು ಪ್ರಶ್ನಿಸಿದರು.

‘ಆರ್‌ಎಸ್‌ಎಸ್‌ನವರು ದೇಶ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಕುಮ್ಮಕ್ಕು ನೀಡುತ್ತಿದ್ದಾರೆ. ಇದನ್ನು ಹಿಮ್ಮೆಟ್ಟಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು’ ಎಂದು ಸಿಎಂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT