ಘಟನೆಯ ವಿವರ: ಹೋರಿ ಹಬ್ಬ ಆಚರಣೆ ನಿಷೇಧಕ್ಕೆ ಸಾರ್ವಜನಿಕರಿಂದ ತೀವ್ರವಾದ ಪ್ರತಿರೋಧ ವ್ಯಕ್ತವಾಯಿತು. ಕೆಲವು ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಿದರು. ಆಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಲು ಮುಂದಾದರು. ಆದರೆ ದುಷ್ಕರ್ಮಿಗಳು ಪೊಲೀಸ್ ವಾಹನದ ಮೇಲೆ ಕಲ್ಲು ತೂರಿದರು. ಮಹಿಳಾ ಸಬ್ ಇನ್ಸ್ಪೆಕ್ಟರ್ ಸುಜಾತಾ ಅವರನ್ನು ಸುರಕ್ಷಿತವಾಗಿ ವಾಹನದಲ್ಲಿ ಕಳಿಸಲು ಮುಂದಾದಾಗ, ಪೊಲೀಸರಿಗೆ ಕಲ್ಲಿನ ಏಟು ಬಿದ್ದು ಗಾಯಗೊಂಡರು.