ನೀತಿ ಆಯೋಗದಲ್ಲಿ ಇತ್ತೀಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಗೋಮೂತ್ರದ ಬಗ್ಗೆ ಸಂಶೋಧನೆ ನಡೆಸುವಂತೆ ಐಸಿಎಆರ್ ಅನ್ನು ಕೋರಲು ನಿರ್ಧರಿಸಲಾಯಿತು. ಕೇಂದ್ರದ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಗಿರಿರಾಜ್ ಕಿಶೋರ್ ಸಭೆಯಲ್ಲಿ ಭಾಗವಹಿಸಿದ್ದರು. ಸಾವಯವ ಕೃಷಿಯಲ್ಲಿ ಗೋಮೂತ್ರ ಮತ್ತು ಸೆಗಣಿ ಬಳಕೆಯ ಬಗ್ಗೆ ಸಂಶೋಧನೆ ಅಗತ್ಯ ಎಂದು ಅವರು ಹೇಳಿದ್ದರು.