ಯಶವಂತ ಶೆಟ್ಟಿ ಖಳನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಬಲಾ ನಾಣಿ, ಅರುಣಾ ಬಾಲರಾಜ್ ತಾರಾಬಳಗದಲ್ಲಿದ್ದಾರೆ. ರವಿ ಬಸ್ರೂರು, ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಜಗದೀಶ್ ವಾಲಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಎ. ವೆಂಕಟೇಶ್, ಆರ್.ಸುಂದರ ಕಾಮರಾಜ್ ಸಿನಿಮಾಕ್ಕೆ ಹಣ ಹೂಡಿದ್ದಾರೆ. ಗುರುದೇಶ್ಪಾಂಡೆ ಇದರ ನಿರ್ದೇಶಕರು. ಕಾವ್ಯಾ ಶೆಟ್ಟಿ ಹಾಗೂ ಹರಿಪ್ರಿಯಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.